ಪೊಳಲಿ: ಕರಿಯಂಗಳ ಗ್ರಾಮದ ಪಲ್ಲಿಪಾಡಿಯ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಶ್ರೀ ಮಂಜುನಾಥನ ಪ್ರಸಾದ ರೂಪದಲ್ಲಿ ೫ ಲಕ್ಷ ರೂಪಾಯಿ ದೇಣಿಗೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ವಿಷ್ಣು ಮೂರ್ತಿ ಭಟ್, ಕರಿಯಂಗಳ ಗ್ರಾಮಪಂಚಾಯತ್ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ ಉಪಾಧ್ಯಕ್ಷರು ಜೀರ್ಣೋದ್ಧಾರ ಸಮಿತಿ, ರಾಜು ಕೋಟ್ಯಾನ್ ಕೋಶಾಧಿಕಾರಿ ಜೀರ್ಣೋದ್ಧಾರ ಸಮಿತಿ, ವಿಜಯ ಪಲ್ಲಿಪಾಡಿ ಸದಸ್ಯರು ಜೀರ್ಣೋದ್ಧಾರ ಸಮಿತಿ, ಪದಾಧಿಕಾರಿಗಳು, ಸರ್ವಸದಸ್ಯರು ಹಾಗೂ ಮತ್ತಿತರರು ಇದ್ದರು.
