ಕೈಕಂಬ:ಶ್ರೀ ರಾಮಾಂಜನೇಯ ಭಜನಾ ಮಂದಿರ(ರಿ) ರತ್ನಗಿರಿ ಬಳ್ಳಾಜೆ ಕುಲವೂರು ಇದರ 62 ನೇ ವರ್ಷದ ಭಜನಾ ಮಂಗಲೋತ್ಸವದ ಅಂಗವಾಗಿ ಶನಿವಾರ ಮಧ್ಯಾಹ್ನ ನಡೆದ ಸಾರ್ವಜನಿಕ ಸತ್ಯನಾರಾಯಣ ಪೂಜೆ ವೇಳೆಗೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಬಳ್ಳಾಜೆ, ಸದಸ್ಯ ಪ್ರವೀಣ್ ಆಳ್ವ ಗುಂಡ್ಯ, ಭಜನಾ ಮಂದಿರದ ಗೌರವಾಧ್ಯಕ್ಷ ಸದಾನಂದ ಶೆಟ್ಟಿ ಕುಲವೂರು ಗುತ್ತು, ಅಧ್ಯಕ್ಷ ತಾರಾನಾಥ ಪೂಜಾರಿ ಉಗ್ರಾಯಿ, ಕಾರ್ಯದರ್ಶಿ ಪ್ರಜ್ವಲ್ ಬಳ್ಳಾಜೆ, ಎಡಪದವು ಬಿಜೆಪಿ ಮಹಾಶಕ್ತಿ ಕೇಂದ್ರದ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಆಳ್ವ ಕoಗಿನಡಿ, ಜಿಲ್ಲಾ ಎಸ್ ಸಿ ಮೋರ್ಚಾ ಸದಸ್ಯ ಹೊನ್ನಯ ಅಟ್ಟೆಪದವು, ಕುಲವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮಹಾಬಲ ಸಾಲ್ಯಾನ್, ಉದ್ಯಮಿ, ಮುಖಂಡ ಚಂದ್ರಹಾಸ್ ಶೆಟ್ಟಿ ನಾರಳ, ಭಜನಾ ಮಂದಿರದ ಪದಾಧಿಕಾರಿಗಳು, ಸದಸ್ಯರು, ಹಾಗೂ ಸ್ಥಳೀಯ ಮುಖಂಡರುಗಳು ಹಾಜರಿದ್ದರು.
