ಪೊಳಲಿ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ (ಬಟ್ರತೋಟ)ಬೆಂಜನಪದವು ಪ್ರಶಾಂತ್ ಕೊಟ್ಟಾರಿ (51) ಅವರು ಜ.16 ರಂದು ಭಾನುವಾರ ನಗರದ ಆಸ್ಪತ್ರೆಯಲ್ಲಿ ನಿಧನರಾದರು.
ಅವರು ಕರಿಯಂಗಳ ಗ್ರಾಂ.ಪಂ.ಮಾಜಿ ಅಧ್ಯಕ್ಷರಾಗಿದ್ದ ಅವರು ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿದ್ದು ಸಮಾಜ ಸೇವೇಯನ್ನು ಮಾಡುತ್ತಾ ವರ್ಷಂಪ್ರತಿ ಶಬರಿಮಲೆ ಯಾತ್ರೆ ಕೈಗೊಳ್ಳುತ್ತಿದ್ದರು ಅವರು ಎಲ್ಲರೊಂದಿಗೆ ಆತ್ಮೀಯರಾಗಿದ್ದು ಬೀಡಿ ಉದ್ಯಮವನ್ನು ನಡೆಸುತ್ತಿದ್ದರು. ಅವರು ಪತ್ನಿ ಒರ್ವ ಪುತ್ರಿ ಹಾಗೂ ತಾಯಿಯನ್ನು ಅಗಲಿದ್ದಾರೆ.
