ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಅಲೆತ್ತೂರು ಮಂಗಳಾ ಪ್ರೆಂಡ್ಸ್ ಸರ್ಕಲ್ ವತಿಯಿಂದ ಭಾನುವಾರ ನಡೆದ ೨೩ ನೇ ವರ್ಷದ ಸಾಮೂಹಿಕ ಶ್ರೀಶನೀಶ್ವರ ಪೂಜೆ ಮತ್ತು ೪೦ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ಹಾಗೂ ೪೦ ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮವನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಸಮಿತಿ ಅಧ್ಯಕ್ಷ ವಿಜಯ ಸುವರ್ಣ, ನೇಮಿರಾಜ್ ಶೆಟ್ಟಿ ಕೊಡಂಗೆ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪರಮೇಶ್ವರ ಶೆಟ್ಟಿ ಚಾವಡಿ, ಯಕ್ಷಗಾನ ಸಮಿತಿ ಅಧ್ಯಕ್ಷ ಮೋನಪ್ಪ ಪೂಜಾರಿ, ಯೋಧ ಪ್ರಕಾಶ್ ಪೂಜಾರಿ ಕುರಿಯಾಳ, ಸಮಾಜ ಸೇವಕರಾದ ಗೋಪಾಲಕೃಷ್ಣ ಆಚಾರ್ಯ ಮಾರ್ನಬೈಲು, ದಿನೇಶ್ ಶೆಟ್ಟಿ ದಂಬೆದಾರ್ ಇದ್ದರು.
