ಬಂಟ್ವಾಳ : ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ , ರೋಟರಿ ಕ್ಲಬ್ ಬಂಟ್ವಾಳ , ಜ/ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ ದೇರಳಕಟ್ಟೆ , ಭಾರತೀಯ ಜೀವ ವಿಮಾ ನಿಗಮ , ಗುಂಪು ಯೋಜನೆ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಜನಶ್ರೀ ವಿಮಾ ಯೋಜನೆಯನ್ವಯ ರೂ.3.5ಲಕ್ಷ ಮೊತ್ತದ ವಿದ್ಯಾರ್ಥಿ ವೇತನಾ ವಿತರಣಾ ಸಮಾರಂಭ ಜರಗಲಿದೆ.
ಅಂದು ಮೇರಮಜಲು ಗ್ರಾಮದ 300 ಬಿ.ಪಿ.ಎಲ್ ಕುಟುಂಬಕ್ಕೆ ಉಚಿತ ಕ್ಷೇಮ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮವು ನ.16ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಫರಂಗಿಪೇಟೆ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ ಎಂದು ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ .

