ಎಳ್ಳಾರೆ:ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ಪಂಚಮ ವರ್ಷದ ವಾರ್ಷಿಕೋತ್ಸವವು ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವೈಭವದಿಂದ ನಡೆಯಿತು.

ಸಭಾ ಕಾರ್ಯಕ್ರಮವನ್ನು ಐಎಎಸ್ ಅಧಿಕಾರಿ ಸದಾಶಿವ ಪ್ರಭು ಎಳ್ಳಾರೆ ಅವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ 27 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಸುಬೇದಾರ್ ರವೀಂದ್ರ ಕಾಮತ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಯೋಗೀಶ್ ಮಲ್ಯ,ಕಡ್ತಲ ಗ್ರಾ.ಪಂ ಅಧ್ಯಕ್ಷೆ ಮಾಲತಿ ದಿನೇಶ್ ಕುಲಾಲ್,ಉಪಾಧ್ಯಕ್ಷ ಸತೀಶ್ ಪೂಜಾರಿ,ಅರ್ಚಕ ಜನಾರ್ದನ ಆಚಾರ್ಯ,ಉದ್ಯಮಿ ದಿನೇಶ್ ಕಿಣಿ,ವೈದ್ಯ ಪ್ರಮೋದ್ ಹೆಗ್ಡೆ, ಭಜನಾ ಮಂಡಳಿಯ ಸಂಸ್ಥಾಪಕ ದೇವೇಂದ್ರ ಕಾಮತ್ ಎಳ್ಳಾರೆ ಉಪಸ್ಥಿತರಿದ್ದರು.

ಶಾಂತಿ ಪ್ರಭು ಸ್ವಾಗತಿಸಿದರು.

ದೀಪಕ್ ಕಾಮತ್ ಎಳ್ಳಾರೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

By suddi9

Leave a Reply

Your email address will not be published. Required fields are marked *