ಬಂಟ್ವಾಳ: ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಂಟ್ವಾಳ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಢಯಿತು.ಬಂಟ್ವಾಳ ರೋಟರಿ ಕ್ಲಬ್‌ ನ ಅಧ್ಯಕ್ಷರಾದ ಪ್ರಕಾಶ್ ಬಾಳಿಗೆ ಅವರು ಪಂದ್ಯಾಟವನ್ನು ಉದ್ಘಾಟಿಸಿ ಶುಭಹಾರೈಸಿದರು. 

  ಶ್ರೀ ದೇವಳದ ಆಡಳಿತ ಮೊಕ್ತೇಸರರಾದ  ಆಶೋಕ್ ಶೆಣೈ, ಶಾಲಾ ಸಂಚಾಲಕರಾದ ಭಾಮಿ ನಾಗೇಂದ್ರನಾಥ್ ಶೆಣೈ, ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ  ಜ್ಞಾನೇಶ್ , ದೈಹಿಕ ಶಿಕ್ಷಣ ಶಿಕ್ಷಕರ ಪರಿವೀಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್ , ಶಿಕ್ಷಣ ಸಂಯೋಜಕರಾದ  ಸುಜಾತ,ಹಾಗೂ  ಸುಧಾ, ಶಿಕ್ಷಕ,ರಕ್ಷಕ  ಸಂಘದ ಅಧ್ಯಕ್ಷರಾದ ವಸಂತ ಮಲ್ಯ,ಬಂಟ್ವಾಳ ರೋಟರಿ ಕ್ಲಬ್  ಕಾರ್ಯದರ್ಶಿ ಸದಾಶಿವ ಬಾಳಿಗ, ಶಾಲಾ ಮುಖ್ಯೋಪಾಧ್ಯಾಯಿನಿ  ರೋಶನಿ ತಾರಾ ಡಿಸೋಜ ಮತ್ತು ಸಂಘದ  ಪದಾಧಿಕಾರಿಗಳು ಉಪಸ್ಥಿತರಿದ್ದರು.


ಸಮಾರೋಪ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಪ್ರಶಾಂತ್ ಭಂಡಾರ್ ಕಾರ್ : ಮತ್ತು ನಂದಾವರ ಗಣೇಶ್ ಶೆಣೈಯವರು ಅತಿಥಿಗಳಾಗಿ ಭಾಗವಹಿಸಿದರು.ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು.ಶಾಲಾ ಸಹ ಮುಖ್ಯೋಪಾಧ್ಯಾಯಿನಿ  ಜಾನಕಿ ರಾಜೇಶ್ ವಂದಿಸಿದರು. ಶಿಕ್ಷಕ ಮುರಳೀಧರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *