ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕ ವತಿಯಿಂದ ಸ್ಥಳೀಯ ಕಂಟಿಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಮಾರೋಪಗೊಂಡ ವಾರ್ಷಿಕ ವಿಶೇಷ ಶಿಬಿರದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಉಪನ್ಯಾಸಕ ರಘುರಾಜ್ ಉಬರಡ್ಕ ಮಾತನಾಡಿದರು. ಶಾಲೆ ಸಂಚಾಲಕ ಡಾ.ಕೆ.ಪ್ರಭಾಕರ ಭಟ್, ಅನಂತ ಶೆಣೈ, ಪ್ರಾಂಶುಪಾಲ ಕೃಷ್ಣಪ್ರಸಾದ್, ಯೋಜನಧಿಕಾರಿ ಎ.ಹರೀಶ ಮತ್ತಿತರರು ಇದ್ದರು.

