ಬಂಟ್ವಾಳ: ತಾಲೂಕಿನ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಎರಡು ಲಕ್ಷ ರೂ.ಅನುದಾನದ ಚೆಕ್ ನ್ನು ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿಯವರು ದೇವಸ್ಥಾನದ ಅರ್ಚಕರಾದ ವೇ.ಮೂ. ಸುದರ್ಶನ್ ಬಳ್ಳಾಲ್ ರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಕಾರ್ಯಧ್ಯಕ್ಷರಾದ ಸೀತಾರಾಮ, ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ಕೇಂದ್ರ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಸದಾನಂದ ನಾವೂರು, ತೇಜ್ ಪಾಲ್ ಜೈಲ್, ಮೇಲ್ವಿಚಾರಕರಾದ ರಾಜೇಶ್, ಸೇವಾ ಪ್ರತಿನಿಧಿಗಳಾದ ವಿಜಯ, ಸುನಿತಾ ಉಪಸ್ಥಿತರಿದ್ದರು
