ಬಂಟ್ವಾಳ:ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಕವಿ, ಸಾಹಿತಿ, ನಾಟಕ ಬರಹಗಾರರಾದ ಎಂ.ಡಿ. ಮಂಚಿ ಅವರು ನಿಯುಕ್ತಿಯಾಗಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

ನೂತನ ಪ್ರಾಂಶುಪಾಲರಾದ ಎಂ.ಡಿ.ಮಂಚಿ ಅವರನ್ನು ಕಾಲೇಜು ಆಡಳಿತ ಮಂಡಳಿಯ ಸಂಚಾಲಕರಾದ ಕೆ.ರೇಖಾ ಶೆಣೈ, ಕಾರ್ಯದರ್ಶಿ ಕೂಡಿಗೆ ಪ್ರಕಾಶ್ ಶೆಣೈ ಹಾಗೂ ಪ್ರಾಧ್ಯಾಪಕ ವೃಂದದವರು ಅಭಿನಂದಿಸಿದರು.
