ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಜರಗಿದ ವಿವಿಧ ಭಜನಾ ಮಂಡಳಿಗಳಿಂದ ಏಕಾಹ ಭಜನೋತ್ಸವ. ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಶ್ರೀವಿಷ್ಣು ಸಹಸ್ರನಾಮ,ಪಾರಾಯಣ ಮತ್ತು ತುಳಸಿ ಅರ್ಚನೆ, ಶ್ರೀ ಕೃಷ್ಣನಿಗೆ ಅಭಿಷೇಕ, ಮಹಾಮಂಗಳಾರತಿ , ಅನ್ನಪ್ರಸಾದ ಮಕ್ಕಳ ಛದ್ಮವೇಷ, ಮುದ್ದು ಕೃಷ್ಣ ಸ್ಪರ್ಧೆ

ಬಹುಮಾನ ವಿತರಣೆ, ವಿಶೇಷ ಭಜನೆ ಭಾನುವಾರ ಬಹಳ ವಿಜ್ರಂಭನೆಯಿಂದ ನಡೆದ ಮೊಸರು ಕುಡಿಕೆ ಉತ್ಸವ “ಶ್ರೀ ಕೃಷ್ಣ ಲೀಲೋತ್ಸವ”. ಶ್ರೀ ಕೃಷ್ಣನ ಮೆರವಣಿಗೆಯೊಂದಿಗೆ ಸಂಪನ್ನಗೊಂಡಿತು.

ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಅವರು ಶ್ರೀ ಕೃಷ್ಣಜನ್ಮಾಷ್ಠಮಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದ್ದಾರೆ.

