
ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಶೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದ ಬಿ.ಮೂಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತ ಸರಕಾರ ದ ಅಕ್ಷಯ್ ಮಿತ್ರ ಯೋಜನೆಯಡಿಯಲ್ಲಿ ಕ್ಷಯ ರೋಗಿಗೆ ಒಂದು ತಿಂಗಳ ಪೌಷ್ಟಿಕ ಆಹಾರ ಸಾಮಗ್ರಿ ಗಳ ಕಿಟ್ ವಿತರಿಸಲಾಯಿತು. ಈ ಸಂಧರ್ಭದಲ್ಲಿ ವಲಯದ ಅಧ್ಯಕ್ಷರಾದ ರಾಜೇಂದ್ರ ಕೆ. ಮಾಜಿ ಅಧ್ಯಕ್ಷರುಗಳಾದ ದಯಾನಂದ್ ಬಂಟ್ವಾಳ್, ಸುಕುಮಾರ್, ಹರೀಶ್ ಕುಂದರ್,ಪ್ರದಾನ ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ಉಪಾಧ್ಯಕ್ಷರಾದ ಹರೀಶ್ ನಾಟಿ, ಛಾಯಾ ಕಾರ್ಯದರ್ಶಿ ಪ್ರಶಾಂತ್ ಹಾಗು ಆಸ್ಪತ್ರೆಯ ಸಿಬ್ಬಂದಿ ಗಳು ಉಪಸ್ಥಿತರಿದ್ದರು.
