ಬಂಟ್ವಾಳ : ದ ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ನವೋದಯ ಮಿತ್ರ ಕಲಾ ವೃಂದ ರಿ ನೆತ್ತರಕೆರೆ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಗದೀಶ ಎನ್ ಹಾಗೂ ಪ್ರ ಕಾರ್ಯದರ್ಶಿಯಾಗಿ ಮಹೇಶ್ ಎನ್ ಅವರು ಪುನರಾಯ್ಕೆಯಾಗಿದ್ದಾರೆ. .

ಜ ಸಂಘದ ಕಚೇರಿಯಲ್ಲಿ ಜು.5 ರಂದು ನಡೆದ ವಾರ್ಷಿಕ ಮಹಾ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ಉಳಿದಂತೆ ಪದಾಧಿಕಾರಿಗಳು ಇಂತಿದ್ದಾರೆ.
ಗೌರವಾಧ್ಯಕ್ಷರಾಗಿ ಪಿ ಸುಬ್ರಮಣ್ಯ ರಾವ್, ಸಂಚಾಲಕರಾಗಿ ದಾಮೋದರ ಎನ್, ಉಪಾಧ್ಯಕ್ಷರಾಗಿ ಸಂತೋಷ್ ಕುಲಾಲ್ ನೆತ್ತರಕೆರೆ, ಕೋಶಾಧಿಕಾರಿಯಾಗಿ ರಂಜಿತ್ ದರ್ಖಾಸ್, ಜೊತೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಎನ್, ಕ್ರೀಡಾ ಕಾರ್ಯದರ್ಶಿಯಾಗಿ ಪ್ರವೀಣ್ ಎನ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸಲಹೆಗಾರರಾಗಿ ಬಿ ಸುರೇಶ್ ಭಂಡಾರಿ ಅರ್ಬಿ,ಭಾಸ್ಕರ ಕುಲಾಲ್, ಸದಾನಂದ ಪೂಜಾರಿ, ಚಂದ್ರಹಾಸ ಎನ್ , ಸುರೇಶ್ ಕುಲಾಲ್, ರಾಮ ಪೂಜಾರಿ, ಹಾಗೂ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು
