ಬಂಟ್ಚಾಳ: ರಾಜ್ಯದೆಲ್ಲೆಡೇ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿನ ಕೆಲವೊಂದು ಪ್ರದೇಶಗಳಲ್ಲಿ ಯುವಜನರು ಮತ್ತು ವಿದ್ಯಾರ್ಥಿಗಳಲ್ಲಿ ಡ್ರಗ್, ಗಾಂಜಾ ಸಹಿತ ಮಾದಕ ಸೇವನೆಯು ಅತಿಯಾಗುತ್ತಿದ್ದು,ಇದಕ್ಕೆ ಕಡಿವಾಣ ಹಾಕುವ ಭಾಗವಾಗಿ ಪೊಲೀಸ್ ಇಲಾಖೆ ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆಗೊಳಪಡಿಸಿರುವ ಕಾರ್ಯ  ಶ್ಲಾಘನೀಯವಾಗಿದೆ ಎಂದು ಬಂಟ್ವಾಳ‌ ತಾ.ಪಂ. ಮಾಜಿ ಸದಸ್ಯ ಪ್ರಭಾಕರ ಪ್ರಭು ತಿಳಿಸಿದ್ದಾರೆ.

 

ಇತ್ತೀಚಿಗಿನ ದಿನಗಳಲ್ಲಿ ಸಮಾಜಸೇವೆಯ ಸೋಗಿನಲ್ಲಿ‌ ಆಂಬುಲೆನ್ಸ್ ವಾಹನದಲ್ಲಿಯೂ  ಮಾದಕ ಸೇವನೆಯ ಐಟಂಗಳು ಸಾಗಾಟವಾಗುತ್ತಿರುವುದು ಅಘಾತಕಾರಿ ಸಂಹತಿಯಾಗಿ ಎಂದು ಪ್ರಕಟಣೆಯಲ್ಲಿ‌ತಿಳಿಸಿರುವ ಅವರು ಡ್ರಗ್ ಮಾಪಿಯಾವನ್ನು  ತಡೆಗಟ್ಟುವಿಕೆಯೇ ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮಂಗಳೂರು ನಗರ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿಯು ಡ್ರಗ್, ಗಾಂಜಾ ಘಾಟು ಹೆಚ್ಚಾಗುತ್ತಿದ್ದು,ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇಂತಹ ಸಂದರ್ಭದಲ್ಲಿ ಮಂಗಳೂರು  ಪೊಲೀಸ್ ಕಮಿಷನರ್ ಅವರ ನಿರ್ದೇಶನದಂತೆ ಮೊದಲಾಗಿ ವಿದ್ಯಾರ್ಥಿಗಳನ್ನು ಡ್ರಗ್ ಟೆಸ್ಟ್ ಗೆ ಒಳಪಡಿಸಿರುವ ಕಾರ್ಯವನ್ನು  ಶ್ಲಾಘಿಸಿರುವ ಅವರು ಜಿಲ್ಲೆಯ ಗ್ರಾಮಾಂತರ ಭಾಗಗಳಲ್ಲಿಯು ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ  ಇಂಜಿನಿಯರಿಂಗ್ , ಮೆಡಿಕಲ್ ಕಾಲೇಜು ಸಹಿತ ಎಲ್ಲಾ ಖಾಸಗಿ ಮತ್ತು ಸರಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕೂಡ ಕಾಲೇಜು ಬಿಡುವ ಸಮಯದಲ್ಲಿ ಪ್ರತಿ ತಿಂಗಳಿಗೊಮ್ಮೆಯಾದರೂ ಡ್ರಗ್ ಪರೀಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು  ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ.

By Suddi9

Leave a Reply

Your email address will not be published. Required fields are marked *