ಬಂಟ್ವಾಳ: ಶ್ರೀ ಶಾರದಾ ಸೇವಾ ಪ್ರತಿಷ್ಠಾನ ರಿ. ತುಂಬೆ ಇದರ ಆಶ್ರಯದಲ್ಲಿ ನಡೆಯಲಿರುವ 26ನೇ ವರ್ಷದ ತುಂಬೆ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರದ ಬಿಡುಗಡೆ ಕಾರ್ಯಕ್ರಮ ತುಂಬೆ ಶ್ರೀ ಶಾರದಾ ಸಮುದಾಯ ಭವನದಲ್ಲಿ ನಡೆಯಿತು

ಶಾರದಾ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಗಣೇಶ್ ಸುವರ್ಣ ತುಂಬೆ ಅವರು ಅಮಂತ್ರಣಪತ್ರವನ್ನು ಬಿಡುಗಡೆಗೊಳಿಸಿದರು.

ಈ ಸಂಧರ್ಭದಲ್ಲಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ದಿವಾಕರ ಪೆರ್ಲಬೈಲು, ಕೋಶಾಧಿಕಾರಿ ರಾಘವ ಬಂಗೇರ ಪೆರ್ಲಬೈಲು, ತೇವು ತಾರಾನಾಥ ಕೊಟ್ಟಾರಿ, ಉತ್ಸವ ಸಮಿತಿ ಅಧ್ಯಕ್ಷರಾದ ಕಿಶೋರ್ ನಿಸರ್ಗ ದೇಮುಂಡೆ, ಪ್ರಧಾನ ಕಾರ್ಯದರ್ಶಿ ಜಗನ್ನಾಥ್ ಸಾಲಿಯಾನ್ ತುಂಬೆ, ಕೋಶಾಧಿಕಾರಿ ಸದಾನಂದ ಕೋಡಿಯಡ್ಕ, ಹಿರಿಯರಾದ ನೀಲಪ್ಪ ಸಾಲಿಯಾನ್, ವೇಣುಗೋಪಾಲ್ ಕೊಟ್ಟಾರಿ ತುಂಬೆ ಸಹಿತ ಕಾರ್ಯಕರ್ತರು ಉಪಸ್ಥಿರಿದ್ದರು.
