ಬಂಟ್ವಾಳ:ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾ.ನ ಧನುಪೂಜೆ ಸಮೀಪದ ಕಮ್ಮಾಜೆ ಎಂಬಲ್ಲಿ ವ್ಯಕ್ತಿಯೋರ್ವ ಮೇಸ್ತ್ರೀಯೋರ್ವರಿಗೆ ಚೂರಿಯಿಂದ ಇರಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಕಮ್ಮಾಜೆಯ ಮೂಡಾಯಿಕೋಡಿ ನಿವಾಸಿ ಎನ್ನಲಾದ ಪ್ರಶಾಂತ್ ಯಾನೆ ಪಚ್ಚು ಎಂಬಾತ ಮೇಸ್ತ್ರೀ ಪ್ರಶಾಂತ್ ಎಂಬವರಿಗೆ ಚೂರಿ ಇರಿದಿದ್ದಾನೆಂದು ತಿಳೊದು ಬಂದಿದೆ.ಗಾಯಾಳು ಪ್ರಶಾಂತ್ ನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಲಾಗಿದೆ.ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಈ ಘಟನೆ ನಡೆದಿದೆಯೆನ್ನಲಾಗಿದೆ .ಸುದ್ದಿ ತಿಳಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ,ಪ್ರಕರಣದಾಖಲಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
