ಬಂಟ್ವಾಳ: ಬಂಟ್ವಾಳ ಬಿಜೆಪಿಯ ಸಂಗಬೆಟ್ಟು ಶಕ್ತಿ ಕೇಂದ್ರದ ವತಿಯಿಂದ ಭಾರತರತ್ನ ಪ್ರಶಸ್ತಿ ಮಾಜಿ ಪ್ರಧಾನಿ ಅಟಲ್ ಬಿಹಾರ್ ವಾಜಪೇಯಿ ಅವರ 90ನೇ ಜನ್ಮದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು.

ಬಿಜೆಪಿ ಪ್ರಮುಖ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಅಟಲ್ ಬಿಹಾರಿ ವಾಜಪೇಯಿ ಅವರು ಈ ದೇಶದ ಮಹಾನ್ ನಾಯಕರಲ್ಲಿ ಓರ್ವರಾಗಿದ್ದು ಅಜಾತಶತ್ರು ಎನಿಸಿಕೊಂಡಿದ್ದಾರೆ. ಭಾರತರತ್ನ ಪ್ರಶಸ್ತಿ ದೇಶಕ್ಕೆ ಸಂದ ಗೌರವ ಎಂದು ಹೇಳಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೇವದಾಸ್ ಶೆಟ್ಟಿ , ಜಿ.ಪಂ.ಸದಸ್ಯೆ ನಳಿನಿ ಬಿ.ಶೆಟ್ಟಿ , ತಾ.ಪಂ.ಸದಸ್ಯೆ ರೇವತಿ ಆರ್. ಪೂಜಾರಿ, ಬಿಜೆಪಿ ಪ್ರಮುಖರಾದ ರತ್ನಕುಮಾರ್ ಚೌಟ, ಸಂಗಬೆಟ್ಟು ಶಕ್ತಿ ಕೇಂದ್ರದ ಸಂಚಾಲಕ ಹರೀಶ್ ಆಚಾರ್ಯ, ಸತೀಶ್ ಪೂಜಾರಿ, ಸಂದೇಶ ಶೆಟ್ಟಿ , ಮಾಧವ ಶೆಟ್ಟಿಗಾರ್, ರಾಘವ ಅಮೀನ್, ಸಂತೋಷ್ ಕುಮಾರ್ ಬೆಟ್ಟು , ಭಾರತಿ ಚೌಟ ಮತ್ತಿತರರು ಉಪಸ್ಥಿತರಿದ್ದರು.
