ಮಂಗಳೂರು : ನಗರದ ಕದ್ರಿ ಪಾರ್ಕ್ಗೆ ಶುಕ್ರವಾರ ಮುಂಜಾನೆ ಮಂಗಳೂರು ಶಾಸಕ ಜೆ.ಆರ್.ಲೋಬೋ ಭೇಟಿ ಕೊಟ್ಟು ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಕದ್ರಿ ಪಾರ್ಕ್ನಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕರು ಸಂಬಂಧಪಟ್ಟವರಲ್ಲಿ ಕಾಮಗಾರಿ ವಿಳಂಬ ಮಾಡದೆ ಕ್ಲಪ್ತ ಸಮಯದಲ್ಲಿ ಮುಗಿಸುವಂತೆ ಆದೇಶ ನೀಡಿದರು. ಕದ್ರಿ ಪಾರ್ಕ್ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದು, ಅವುಗಳನ್ನು ಆದಷ್ಟು ಬೇಗ ಪೂರೈಸಲಾಗುವುದು ಎಂದು ಅವರು ಹೇಳಿದರು.



