ಬಂಟ್ವಾಳ: ಉಪತಹಶೀಲ್ದಾರರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ರೋಹಿನಾಥ ಮತ್ತು ಪ್ರಭಾರ ಶಿಶು ಅಭಿವೃದ್ದಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸುಬ್ರಹ್ಮಣ್ಯ ಅವರನ್ನು ಕರ್ನಾ ಟಕ ರಾಜ್ಯ ಸರಕಾರ ನೌಕರರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ರಾಜ್ಯ ಸರಕಾರ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ರಾಜ್ಯ ಸರಕಾರ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ನಾಗೇಶ್, ರಾಜ್ಯ ಸರಕಾರ ನೌಕರರ ಸಂಘದ ಉಪಾಧ್ಯಕ್ಷೆ ಸುನಂದಾ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮತ್ತು ಪ್ರೌಡ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಜೊಯೆಲ್ ಲೊಬೊ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು
