ಬಂಟ್ವಾಳ: ಜು.15ರಂದು ಬುಧವಾರ ಸಂಜೆ 4ರಿಂದ 7 ಗಂಟೆಯವರೆಗೆ ದಕ್ಷಣ ಕನ್ನಡ ಜಿಲ್ಲಾ ಲೋಕ ಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಬಿಜೆಪಿ ಕಛೇರಿ ಬಿಸಿರೋಡ್ ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ವತಿಯಿಂದ ಬಿಸಿರೋಡ್ ಪ್ರಮುಕ ವೃತ್ತಕ್ಕೆ ಬ್ರಹ್ಮ ಶ್ರೀನಾರಾಯಣಗುರುಗಳ ಹೆಸರನ್ನು ನಾಮಕರಣ ಮಾಡುವಂತೆ ಸಂಸದರಿಗೆ ಮನವಿ ಮಾಡಲಾಗುವುದು ಎಂದು ಬಿಜೆಪಿ ಪ್ರ.ಕಾರ್ಯದರ್ಶಿ ದೇವಪ್ಪ ಪೂಜಾರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
