ಮಂಗಳೂರು: ಈ ವರ್ಷ ಹಜ್ಜ್ ಯಾತ್ರೆ ಕೈಗೊಳ್ಳುವ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಯಾತ್ರಾರ್ಥಿಗಳಿಗೆ ಚುಚ್ಚು ಮದ್ದು (ವ್ಯಾಕ್ಸಿನ್) ಹಾಗೂ ಪೊಲಿಯೊ ಲಸಿಕೆ ನೀಡುವ ಕಾರ್ಯಕ್ರಮ ಬುಧವಾರ ಯೇನಪೊಯ ಆಸ್ಪತ್ರೆ ಕೊಡಿಯಲ್ಬೈಲ್, ಮಂಗಳೂರು ಇಲ್ಲಿ ನಡೆಯಿತು.


ಶಿಬಿರದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸುಮಾರು 70 ಕ್ಕಿಂತಲೂ ಹೆಚ್ಚು ಹಜ್ಜ್ ಯಾತ್ರಾರ್ಥಿಗಳು ಚುಚ್ಚು ಮದ್ದು ಹಾಗೂ ಲಸಿಕೆಯನ್ನು ಹಾಕಿಸಿಕೊಂಡರು ಎಂದು ಮಂಗಳೂರು ಹಜ್ಜ್ ನಿರ್ವಾಹಣಾ ಸಮಿತಿಯ ಅಧ್ಯಕ್ಷ ಯೇನಪೊಯ ಮೊಹಮ್ಮದ್ ಕುಂಞ ಹೇಳಿದರು.
ದ.ಕ.ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಹಾಗೂ ಮತ್ತಿತ್ತರರು ಕಾರ್ಯಕ್ರಮದಲ್ಲಿ ಹಾಜಾರಿದ್ದರು.
