ಬಂಟ್ವಾಳ: ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವ ಸಂಘದ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 161ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕೀಲು ಕುದುರೆಯ ಹಿರಿಯ ಕಲಾವಿದ ಗೋಪಾಲಕೃಷ್ಣ ಬಂಗೇರಾ ಮದ್ಧ, ಫೋಟೋಗ್ರಾಫಿಯಲ್ಲಿ ಅಂತರ್ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕ್ರತ ನಿತ್ಯಪ್ರಕಾಶ್ ಎಚ್.ಎಸ್.ಬಂಟ್ವಾಳ್, ರೈಫಲ್ ಶೂಟಿಂಗ್ನಲ್ಲಿ ರಾಜ್ಯಮಟ್ಟದಲ್ಲಿ ಬೆಳ್ಳಿಪದಕ ಪಡೆದಿರುವ ಹರ್ಷಿತ್ ಆರ್.ಬಿ.ಕೊರಂಟಬೆಟ್ಟು ಗುತ್ತು ಅವರನ್ನು ಸನ್ಮಾನಿಸಲಾಯಿತು. ಅರ್ಹ 11 ವಿದ್ಯಾರ್ಥಿಗಳ ದತ್ತು ಸ್ವೀಕಾರ, ಗ್ರಾಮ ಪಂಚಾಯತು ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಆಯ್ಕೆಯಾದ ಸಮುದಾಯದ ಅಭ್ಯರ್ಥಿಗಳ ಅಭಿನಂದನೆ ನಡೆಯಿತು.

ಮಂಗಳೂರು ಪೊಲೀಸ್ ಕಮೀಷನರ್ ಎಸ್.ಮುರುಗನ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ, ಉಪಾಧ್ಯಕ್ಷ ರಾಘವ ಅಮೀನ್, ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್, ಕೋಶಾಧಿಕಾರಿ ಮಹಾಬಲ ಬಂಗೇರ ಎನ್.ಕೆ, ಜತೆ ಕಾರ್ಯದರ್ಶಿ ಶಂಕರ್ ಕಾಯರ್ಮಾರ್, ಲೆಕ್ಕ ಪರಿಶೋಧಕ ಗಿರೀಶ್ ಪೂಜಾರಿ ಬಸ್ರ ಉಪಸ್ಥಿತರಿದ್ದರು.


