ಬಜಪೆ: ಕಳವಾರು ಶ್ರೀ ಬೆಂಕಿನಾಥೇಶ್ವರ ದೇವಳದಿಂದ ಪ್ರವರ್ತಿತ ಯಕ್ಷಗಾನ ಮಂಡಳಿಯ ತಿರುಗಾಟ ಪ್ರಾರಂಭದ ಪೂರ್ವಭಾವಿಯಾಗಿ ಕ್ಷೇತ್ರದಲ್ಲಿ ಸೇವೆಯಾಟ ಸಂದರ್ಭ ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಳದ ಅರ್ಚಕ ಶ್ರೀ ಹರಿನಾರಾಯಣದಾಸ ಅಸ್ರಣ್ಣ ಅವರು ಹಿರಿಯ ಹಿಮ್ಮೇಳ ಕಲಾವಿದ ಧನಂಜಯ ಕುಮಾರ್ ಅರಸಿಕೆರೆ ಹಾಗೂ ಪ್ರಸಾಧನ ಕಲಾವಿದ ರಮೇಶ್ ಅಚಾರ್ಯ ಅವರಗಳನ್ನು ಸನ್ಮಾನಿಸಿ ಗೌರವಿಸಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಶೆಟ್ಟಿ, ಅರ್ಚಕ ಲಕ್ಷ್ಮೀನಾರಾಯಣ ಭಟ್, ಉದ್ಯಮಿ ದುರ್ಗಾಪ್ರಸಾದ್ ಶೆಟ್ಟಿ,ಕಲಾವಿದ ವಾದಿರಾಜ ಕಲ್ಲೂರಾಯ ಅವರುಗಳು ಈ ಸಂದರ್ಭ ಉಪಸ್ಥಿತರಿದ್ದರು.
