ಮೂಡುಬಿದರೆ: ಇಲ್ಲಿನ ಭಾರತೀಯ ಜನತಾ ಪಕ್ಷದ ವತಿಯಿಂದ ದೇಶಕಂಡ ಅಪ್ರತಿಮ ಪ್ರಧಾನಿ ಅಟಲ್ಬಿಹಾರಿ ವಾಜಪೇಯಿರವರ ಜನ್ಮ ದಿನಾಚರಣೆಯ ಅಂಗವಾಗಿ ಸರ್ಕಾರಿ ಆಸ್ಪತ್ರೆಗೆ ಬೆಡ್ಸ್ಪ್ರೆಡ್ಗಳನ್ನು ಸರ್ಕಾರಿ ಆಸ್ಪತ್ರೆಯ ವೈಧ್ಯಾಧಿಕಾರಿ ಡಾ.ಶಶಿಕಲರವರಿಗೆ ಹಸ್ತಾಂತರಿಸಲಾಯಿತು. ಹಾಗೂ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿಯ ಹಿರಿಯರಾದ ಕೆ. ಆರ್. ಪಂಡಿತ್, ಪುರಸಭಾ ಸದಸ್ಯರಾದ ಎಂ. ಬಾಹುಬಲಿ ಪ್ರಸಾದ್, ಲಕ್ಷ್ಮಣ ಪೂಜಾರಿ, ಪ್ರಸಾದ್ ಕುಮಾರ್, ನಾಗರಾಜ ಪೂಜಾರಿ, ಹಾಗೂ ಪ್ರಮುಖರಾದ ಕೃಷ್ಣರಾಜ ಹೆಗ್ಡೆ, ಹರೀಶ್ ಎಂ. ಕೆ, ಅಶೋಕ್ ಆಚಾರ್ಯ, ಅಜಯ್ ರೈ, ಪ್ರವೀಶ್ ಒಂಟಿಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.
