ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮಾನಬೈಲು ಸಮೀಪದ ನಾಗನವಳಚ್ಚಿಲು ಎಂಬಲ್ಲಿ ಇಲ್ಲಿನ ಶ್ರೀ ದುರ್ಗಾ ಪರಮೇಶ್ವರಿ ಸೇವಾ ಸಮಿತಿ ವತಿಯಿಂದ ಇದೇ 9ರಂದು ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ‘ಸಮುದ್ರ ಮಥನ’ ಎಂಬ 43ನೇ ವರ್ಷದ ಯಕ್ಷಗಾನ ಬಯಲಾಟ ನಡೆಯಲಿದೆ. ಅಂದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದ್ದು, ಮಾ.4ರಂದು ರಾತ್ರಿ ಇದೇ ಸ್ಥಳದಲ್ಲಿ ಮತ್ತೆ ‘ಶ್ರೀ ದೇವಿ ಮಹಾತ್ಮೆ’ ಎಂಬ ಹರಿಕೆ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಸಮಿತಿ ಸ್ಥಾಪಕಾಧ್ಯಕ್ಷ ಡಾ.ಎಚ್.ಪಿ.ಸಪಳಿಗ ತಿಳಿಸಿದ್ದಾರೆ.
