ಮೂಡುಬಿದರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ತೆಂಕತಿಟ್ಟು ಯಕ್ಷಗಾನ ಸರಣಿ ಕಾರ್ಯಕ್ರಮ ಆಳ್ವಾಸ್ ಯಕ್ಷಸಿರಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ಉದ್ಯಮಿ ಕೆ.ಶ್ರೀಪತಿ ಭಟ್ ಯಕ್ಷಸಿರಿಗೆ ಚಾಲನೆ ನೀಡಿದರು. ಆಳ್ವಾಸ್ ಸಂಸ್ಥೆಯ ಪಿಆರ್ಒ ಡಾ.ಪದ್ಮನಾಭ ಶೆಣೈ ಉಪಸ್ಥಿತರಿದ್ದರು. ಗಾಳಿಮನೆ ವಿನಾಯಕ ಭಟ್ ಕಾರ್ಯಕ್ರಮ ನಿರೂಪಿಸಿದರು.
ಶುಕ್ರವಾರ ಮಹಿಷವಧೆ, ಶನಿವಾರ ಸುದರ್ಶನ ವಿಜಯ ಯಕ್ಷಗಾನ ಪ್ರದರ್ಶನಗೊಂಡಿತು. ಏ.17ರಂದು ತರಣಿಸೇನ ಕಾಳಗ, ಏ.19 ಮೋಹಿನಿ ಏಕಾದಶಿ, ಏ.20ರಂದು ಶ್ರೀದೇವಿ ಕದಂಬ ಕೌಶಿಕೆ ಯಕ್ಷಗಾನ ಪ್ರದರ್ಶನಗೊಳ್ಳಲಿದೆ


