ಕಿನ್ನಿಗೋಳಿ: ಯುಗಪುರುಷ ಸಂಸ್ಥಾಪಕ ದಿ| ಕೊ.ಅ.ಉಡುಪರ ಸಂಸ್ಮರಣಾರ್ಥ ಪ್ರತೀ ವರ್ಷ ಗೌರವಪೂರ್ವಕವಾಗಿ ನೀಡಲಾಗುವ ಕೊ.ಅ. ಉಡುಪ ಪ್ರಶಸ್ತಿಗೆ ಈ ಬಾರಿ ಸಾಹಿತಿ, ಹರಿದಾಸ ಸಾಹಿತ್ಯದಲ್ಲಿ ವಿಶಿಷ್ಟ ರೀತಿಯ ಸೇವೆ ಸಲ್ಲಿಸಿದ ಬಿ.ಕೆ.ಶ್ರೀಮತಿ ರಾವ್ ಆಯ್ಕೆಯಾಗಿದ್ದಾರೆ, ಗುರುಪ್ರಿಯ ನಾಮಾಂಕಿತದಿಂದ ಹೆಸರುವಾಸಿಯಾಗಿರುವ ಇವರ ಸುಮಾರು 32ಕ್ಕೂ ಮಿಕ್ಕಿ ಕೃತಿಗಳು ಪ್ರಕಟಗೊಂಡಿದೆ. ಇವರ ಬರಹಗಳು ಯುಗಪುರುಷ ಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತಾ ಬಂದಿವೆ ಅಲ್ಲದೆ ಇವರಿಗೆ ಅನೇಕ ಪ್ರಶಸ್ತಿಗಳು ಲಭಿಸಿವೆ.

9kinni prashasti
ಕೊ.ಅ.ಉಡುಪ ಪ್ರಶಸ್ತಿಯನ್ನು ಇದೇ ಜುಲೈ 24ರಂದು ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಜರಗಲಿರುವ ಕೊ.ಅ.ಉಡುಪ ಸಂಸ್ಮರಣ ಸಮಾರಂಭದಲ್ಲಿ ರೂ. 10,000/- ನಗದು, ಗೌರವ ಫಲಕ, ಪ್ರಶಸ್ತಿ ಪತ್ರದೊಂದಿಗೆ ಪ್ರದಾನ ಮಾಡಲಾಗುವುದು ಎಂದು ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *