ಬೆಲ್ಜಿಯಂ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ರಾಕೇಶ್ (39ವರ್ಷ) ಸಿದ್ದರಾಮಯ್ಯ ಶನಿವಾರ ಬೆಲ್ಜಿಯಂನ ಬ್ರುಸೆಲ್ಸ್ ಸಿಟಿಯ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ವಿಧಿವಶರಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

IMG-20160730-WA0068 - Copy

IMG-20160730-WA0073

ಬೆಲ್ಜಿಯಂ ಪ್ರವಾಸದಲ್ಲಿದ್ದ ರಾಕೇಶ್  ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಅವರನ್ನು ಬ್ರಸೆಲ್ಸ್ ನ ಯೂನಿರ್ವಸಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ರಾಕೇಶ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು, ಜೀವನ್ಮರಣದ ಹೋರಾಟ ನಡೆಸುತ್ತಿದ್ದ ರಾಕೇಶ್ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆಂದು ಮೂಲಗಳು ತಿಳಿಸಿವೆ. ಪುತ್ರನ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, 2ನೇ ಪುತ್ರ ಡಾ.ಯತೀಶ್  ಕೂಡಾ ಬೆಲ್ಜಿಯಂಗೆ ತೆರಳಿದ್ದರು.

 

 

By suddi9

Leave a Reply

Your email address will not be published. Required fields are marked *