ಬಂಟ್ವಾಳ: ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಹಾಗೂ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಬೆಂಜನಪದವಿನಲ್ಲಿ ನಡೆದ ಪ್ರಾಯೋಗಿಕ ಪ್ರೇರಣಾ ಶಿಬಿರವನ್ನು ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಹೆಗಡೆ ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಉಪಾಧ್ಯಕ್ಷ ಜಗ ದೀಶ್ ಎಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಮಧ್ವರಾಜ್ ಸುವರ್ಣ ಸ್ವ-ಉದ್ಯೋಗ ದ ಬಗ್ಗೆ ಮಾಹಿತಿ ನೀಡಿದರು. ಲಯನೆಸ್ ಅಧ್ಯಕ್ಷೆ ದೇವಿಕಾ ದಾಮೋದರ್, ಕಾರ್ಯದರ್ಶಿ ಉಮೇಶ್ ಆಚಾರ್, ಧರ್ಮದರ್ಶಿ ರಮೇಶ್, ಉಮೇಶ್ ಸಾಲ್ಯಾನ್ , ಬಸಪ್ಪ ಮುಧೋಳು ಹಾಗೂ ಶ್ರೀ ಕೃಷ್ಣ ಸಮಿತಿ ಅಧ್ಯಕ್ಷ ಸಂದೀಪ್ ಉಪಸ್ಥಿತರಿದ್ದರು.

