ಮೂಡುಬಿದಿರೆ: ಎಕ್ಸಲೆಂಟ್ ಪಿಯು ಕಾಲೇಜಿನ ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಕಳದ ತಾಲೂಕಿನ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ನೀಡಿದರು. ನಿಟ್ಟೆ, ಬೋಳ ಸುರೇಂದ್ರ ಕಾಮತ್ ಗೇರು ಬೀಜ ಕಾರ್ಖಾನೆಯಲ್ಲಿ ಸಂಸ್ಥೆಯ ಮನೋಜ್ ವಿಕ್ರಮ್ ಹಾಗೂ ಸಂದೀಪ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಸಂಸ್ಥೆಯ ಆಡಳಿತ ನಿರ್ದೇಶಕ ರಾಜೇಶ್ ಕಾಮತ್ ವ್ಯವಹಾರ ಕ್ಷೇತ್ರದ ಸೂಕ್ಷಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ನಿಟ್ಟೆಯ ಲೆಮಿನಾ ಫೌಂಡ್ರೀಸ್ ವಿದ್ಯಾರ್ಥಿಗಳು ಭೇಟಿ ನೀಡಿದ್ದು, ಸಂಸ್ಥೆಯ ಸಂಪರ್ಕಾಧಿಕಾರಿ ಸತೀಶ್ ಬಸವರಾಜ್ ಮಾಹಿತಿ ನೀಡಿದರು. ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ, ಉಪನ್ಯಾಸಕಿ ಸಂಧ್ಯಾ ಉಪಸ್ಥಿತರಿದ್ದರು.

