ಬಂಟ್ವಾಳ: ವರ್ಷ ಪೂರ್ತಿ ಒಂದಿಲ್ಲೊಂದು ಜಾತಿ, ಧರ್ಮಗಳ ಹಬ್ಬ ಹರಿದಿನಗಳು ನಡೆಯುವ ಕರಾವಳಿ ಜಿಲ್ಲೆಗಳಲ್ಲಿ ಮನುಷ್ಯ ಮನುಷ್ಯರ ನಡುವೆ ಸಾಮರಸ್ಯದ ಕೊರತೆ ಎದ್ದು ಕಾಣುತ್ತಿದೆ. ಇದು ಖೇದಕರವಾದ ಸಂಗತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

kar_3764

ಅವರು ಬಂಟ್ವಾಳ ಬೈಪಾಸ್‍ನಲ್ಲಿರುವ ಲೆವಿನ್ ಸಮೂಹ ಸಂಸ್ಥೆಗಳ ಕಚೇರಿಯಲ್ಲಿ ವಿಶಿಷ್ಟವಾಗಿ ನಡೆದ ಆಯುಧ ಪೂಜಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡಿದರು.ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾದಾಗ ಬಡವರು, ಅಮಾಯಕರು, ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಕೋಮುವಾದ ಮತ್ತು ಮತೀಯವಾದಿಗಳ ಸುಳ್ಳು ಸುದ್ದಿಗಳಿಗೆ ಕಿವಿ ಕೊಡದೆ ಜನರು ಮನುಷ್ಯತ್ವವನ್ನು ಮೈಗೂಡಿಸಿ ಪರಸ್ಪರ ಪ್ರೀತಿ ಸೌಹಾರ್ದತೆಯಿಂದ ಬಾಳಬೇಕಾಗಿದೆ ಎಂದು ಕರೆ ನೀಡಿದರು. ಸಾರ್ವಜನಿಕರ ಉತ್ತಮ ಸೇವೆಗೆ ಹೆಸರಾಗಿರುವ ಲೆವಿನ್ ಸಮೂಹ ಸಂಸ್ಥೆಯು ಕಾರ್ಮಿಕರಿಗೆ ಕ್ರೀಡೋತ್ಸವ, ಕಣ್ಣು ತಪಾಸಣೆ ಶಿಬಿರಗಳನ್ನು ಹಮ್ಮಿಕೊಂಡು ಅಗತ್ಯ ಚಿಕಿತ್ಸೆಗಳನ್ನು ನೀಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಯುಧ ಪೂಜೆ ನಡೆಸುತ್ತಾ ಬಂದಿರುವುದು ಶಾಘ್ಲಾನೀಯವಾಗಿದೆ ಎಂದು ಹೇಳಿದರು.

kar_3858

ಅಗ್ರಾರ್ ಚರ್ಚ್‍ನ ಧರ್ಮಗುರು ಲಿಗೋರಿ ಡಿಸೋಜ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ಬಳಿಕ ಧರ್ಮಗುರು ಎಲ್ಲಾ ವಾಹನಗಳು ಹಾಗೂ ಯಂತ್ರೋಪಕರಣಗಳಿಗೆ ತೀರ್ಥ ಪ್ರೋಕ್ಷಣೆ ಮಾಡುವುದರೊಂದಿಗೆ ಪೂಜಾ ವಿಧಿವಿಧಾನ ನೆರವೇರಿಸಿದರು. ಬಳಿಕ ನಡೆದ ಸರಳ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಅವರು ಕ್ರೀಡಾಕೂಟದಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಿದರು. ಬಳಿಕ ಎಲ್ಲಾ ಕಾರ್ಮಿಕರಿಗೆ ಹಾಗೂ ಕಾರ್ಮಿಕರ ಕುಟುಂಬಗಳಿಗಾಗಿ ಮಂಗಳೂರಿನ ಪ್ರಸಾದ್ ನೇತ್ರಾಲಯದ ವೈದ್ಯರ ತಂಡ ಉಚಿತ ಕಣ್ಣು ಚಿಕಿತ್ಸಾ ಶಿಬಿರವನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಮೊನಿಕ ರೋಡ್ರಿಗಸ್, ರಾಜೇಶ್ ರೋಡ್ರೀಗಸ್, ವರದರಾಜ್, ಪ್ರಸಾದ್ ಆಸ್ಪತ್ರೆಯ ಡಾ. ಸವಿತ ಮೊದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಮಾಲಕ ಪಿಯೂಸ್ ರೋಡ್ರಿಗಸ್ ಸ್ವಾಗತಿಸಿದರು. ರಾಜೇಶ್ ಕಕ್ಯೆಪದವು ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *