ಉಡುಪಿ: ಜೇಸಿಐ ಉಡುಪಿ ಸಿಟಿ ಇದರ ಅದ್ಯಕ್ಷ ಮತ್ತು ಯುವ ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ರವರು ಕರ್ನಾಟಕ ಸಾಂಕ್ರತಿಕ ಅಕಾಡೆಮಿ ಮತ್ತು ರಾಷ್ಟ್ರೀಯ ಶಿಕ್ಷಣ ತರಬೇತಿ ಸಂಸ್ಥೆ ಬೆಂಗಳೂರು ಇದರ ವತಿಯಿಂದ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವ ಜನರಿಗೆ ನೀಡಲಾಗುವ ಕರ್ನಾಟಕ ಭೂಷಣ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭವು ರವೀಂದ್ರ ಕಲಾಕ್ಷೇತ್ರದ ಕನ್ನಡ ಭವನದಲ್ಲಿ ಅಕ್ಟೋಬರ್.27 ಗುರುವಾರ ನಡೆಯಲಿದೆ.ಕಾರ್ಯಕ್ರಮದಲ್ಲಿ ಬೇಲಿ ಮಠದ ಶ್ರೀಗಳು,ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಾದ ಅರಳಿ ನಾಗರಾಜ, ಸಚಿವ ರಾಮಲಿಂಗಾರೆಡ್ಡಿ ಮುಂತಾದವರು ಭಾಗವಹಿಸಲಿರುವರು.

