ವಿಟ್ಲ : “ ಕ್ರೀಡೆಯ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ” ಎಂದು ಮುಖ್ಯ ಅತಿಥಿಯಾದ ರಾಷ್ಟ್ರೀಯ ವೈಟ್ ಲಿಪ್ಟಿಂಗ್ ತರಬೇತುದಾರರಾದ ಪ್ರಮೋದ್ ಶೆಟ್ಟಿಯವರು ಹೇಳಿದ್ದಾರೆ.

mani-2

???????????????????????????????

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ನ.24ರಂದು ಗುರುವಾರ ನಡೆದ ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು “ಕ್ರೀಡೆಯಿಂದ ಆರೋಗ್ಯ ವರ್ಧಿಸಲು ಸಾಧ್ಯ , ಎಲ್ಲದಕ್ಕೂ ಔಷಧಿಯೇ ಮೂಲವಲ್ಲ” ಎಂದ ಅವರು, ಸ್ಪರ್ಧಾಳುಗಳಿಗೆ ಕ್ರೀಡಾ ಸ್ಪೂರ್ತಿ ಅಗತ್ಯ ಎಂದರು.

mani-3

ಶಾಲಾ ಸಂಚಾಲಕರಾದ ಹಾಗೂ ಕಾರ್ಯಕ್ರಮದ ಅಧ್ಯಕ್ಷರಾದ ಪ್ರಹ್ಲಾದ .ಜೆ. ಶೆಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆದಷ್ಟು ತಮ್ಮನ್ನು ತೊಡಗಿಸಿಕೊಳ್ಳುವುದು ಅಗತ್ಯ ಎಂದರು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಕೆ ಬಾಲಕೃಷ್ಣ ಆಳ್ವರವರು “ಜೀವನದಲ್ಲಿ ಕ್ರೀಡೆಯ ಪಾತ್ರ ಬಹು ಮಹತ್ವದ್ದು” ಎಂದರು.

maani-6

ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ನಾರಾಯಣ ಶೆಟ್ಟಿ , ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ನಿವೃತ್ತ ಶಿಕ್ಷಕಿ ಲಕ್ಷ್ಮಿ , ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶಂಕರ್ .ವಿ , ಶಾಲಾ ಆಡಳಿತಾಧಿಕಾರಿ ಸಿ. ಶ್ರೀಧರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಗ್ರೇಸ್ .ಪಿ. ಸಲ್ಡಾನಾ ಉಪಸ್ಥಿತರಿದ್ದರು .ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ, ಕ್ರೀಡಾ ಜ್ಯೋತಿಯ ಆಗಮನ , ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರ ವಿಧಿಯು ಆಕರ್ಷಕವಾಗಿತ್ತು.

mani-4

mani-5

ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ .ವಿ. ಶೆಟ್ಟಿ ಸ್ವಾಗತಿಸಿ , ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ವಂದಿಸಿದರು . ಶಿಕ್ಷಕಿಯರಾದ ಸುಧಾ ಎನ್.ರಾವ್ ಮತ್ತು ಜಯಶ್ರೀ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು .

By suddi9

Leave a Reply

Your email address will not be published. Required fields are marked *