ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆಯ ದಶಮಾನೋತ್ಸವದ ಪ್ರಯುಕ್ತ ಎಸ್.ಡಿ.ಎಮ್.ಸಿ ಕಾರ್ಯಾಧ್ಯಕ್ಷ ಉಮೇಶ್ ಆಚಾರ್ಯ ಶನಿವಾರ ಧ್ವಜಾರೋಹಣಗೈದರು. ನಂತರ ಶಾಲಾ ಮಕ್ಕಳಿಂದ ಪಥಸಂಚಲನ ನಡೆಯಿತು. ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೆ. ರಾಮ್ ಭಟ್ ಪೊಳಲಿ, ಪ್ರಸಾದ್ ಗರೋಡಿ, ಹರಿಪ್ರಸಾದ್ ಶೆಟ್ಟಿ ಪೊಳಲಿ, ರೋಶನ್ ಪುಂಚಮೆ, ಬಸೀರ್ ಬಡಕಬೈಲ್ ಶಾಲಾ ಮೂಖ್ಯೋಪಧ್ಯಾಯಿನಿ ಉಮಾ ಹಾಗೂ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.











