ವಿಟ್ಲ: ಎನ್ವಿಐಡಿಐಎ ಗ್ರಾಫಿಕ್ಸ್ ಪ್ರೈವೆಟ್ ಲಿಮಿಟೆಡ್ ಬೆಂಗಳೂರು ಇವರು ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿಗೆ ಉಚಿತವಾಗಿ ನೀಡಿದ ಐದು ಕಂಪ್ಯೂಟರ್ಗಳನ್ನು ವಿದ್ಯಾರ್ಥಿಗಳ ಉಪಯೋಗಕ್ಕಾಗಿ ವಿಟ್ಲ ಜೆಸಿಐ ಘಟಕದ ಅಧ್ಯಕ್ಷ ಬಾಬು ಕೊಪ್ಪಳ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿಠಲ ವಿದ್ಯಾ ಸಂಘದ ಕೋಶಾಧಿಕಾರಿ ಎಂ ನಿತ್ಯಾನಂದ ನಾಯಕ್, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ನಿವೃತ್ತ ಕನ್ನಡ ಉಪನ್ಯಾಸಕ ಯು ಎಸ್ ವಿಶ್ವೇಶ್ವರ ಭಟ್ ಹಾಗೂ ಇತರ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಎನ್ ಸುಚೇತನ್ ಜೈನ್ ಕಾರ್ಯಕ್ರಮ ಸಂಯೋಜಿಸಿದು.

