ಬಂಟ್ವಾಳ: 12ನೇ ಶತಮಾನದಲ್ಲಿ ಆರಂಭಗೊಂಡ ಬಸವಣ್ಣ ಚಿಂತನೆ ತತ್ವಾದರ್ಶ ಇಂದಿಗೂ ಸರ್ವಕಾಲಿಕ ಎಂದು ತಹಶೀಲ್ದಾರ್ ಪುರಂಧರ ಹೆಗಡೆ ನುಡಿದರು.
ಅವರು ರಾ ಷ್ಟ್ರೀಯ ಹಬ್ಬ ಗಳ ಸಮಿತಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶನಿವಾರ ನಡೆದ ಬಸವಣ್ಣ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ , ಉದ್ಘಾಟಿಸಿ ಮಾತನಾಡಿದ ಅವರು ಸಮಾಜದ ಜಾತಿ ವ್ಯವಸ್ಥೆ ಪದ್ಧತಿಯ ವಿರುದ್ಧ ಕ್ರಾಂತಿಕಾರಿ ಹೋರಾಟ ನಡೆಸಿದವರಲ್ಲಿ ಬಸವಣ್ಣ ಶ್ರೇಷ್ಠ ದಾ ರ್ಶನಿಕರಾಗಿದ್ದಾರೆ.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿಪ್ರಿಯನ್ ಮಿರಾಂದ ಮಾತನಾಡಿ ಬಸವಣ್ಣ ಚಿಂತನೆಯನ್ನು ಮೈಗೂಡಿಸಲು ವಿದ್ಯಾರ್ಥಿಗಳು ಪ್ರಯತ್ನಿಸಬೇಕೆಂದರು.
ಉಪತಹಶೀಲ್ದಾರ್ ಭಾಸ್ಕರ್ ರಾವ್, ಅಪರಾಧ ವಿಭಾಗದ ಪಿಎಸ್ಐ ಗಂಗಾಧರಪ್ಪ , ಪತ್ರಕರ್ತ ಫಾರೂಕ್ ಗೂಡಿನಬಳಿ, ಕಂದಾಯ ನಿರೀಕ್ಷಕರಾದ ರಾಮ.ಕೆ., ದಿವಾಕರ್, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ , ರಾ ಷ್ಟ್ರೀಯ ಹಬ್ಬ ಗಳ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ನವೀನ್ ಸ್ವಾಗತಿಸಿದರು. ಗ್ರಾಮ ಕರಣಿಕರ ಸಂಘದ ಜಿಲ್ಲಾಧ್ಯಕ್ಷ ಜನಾರ್ಧನ್ ವಂದಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಕರಣಿಕರು, ಗ್ರಾಮ ಸಹಾಯಕರು ಹಾಜರಿದ್ದರು.
