ಬಂಟ್ವಾಳ : ಕಂದಾಯ ಇಲಾಖೆಯಲ್ಲಿ ಉಪತಹಶೀಲ್ದಾರ್ ರಾಗಿ ಸೇವೆ ಸಲ್ಲಿಸಿದ ಭಾಸ್ಕರ್ ರಾವ್ ರವರ ಬೀಳ್ಕೊಡುಗೆ ಸಮಾರಂಭವು ತಾ.ಪಂ. ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಜರಗಿತು.
ಅಧಿಕಾರಿಗಳು ಜನಸ್ನೇಹಿಯಾದರೆ ಮಾತ್ರ ಜನಮನದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ. ಈ ಮಾತಿಗೆ ಭಾಸ್ಕರ್ ರಾವ್ ರವರ ಸೇವೆ ಉತ್ತಮ ನಿದ ರ್ಶನ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ಭಾಸ್ಕರ್ ರಾವ್ ಕ್ರಿಯಾಶೀಲ ಅಧಿಕಾರಿ ಎಂದು ತಹಶೀಲ್ದಾರ್ ಪುರಂಧರ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಸನ್ಮಾನಿಸಿ ಮಾತನಾಡಿದರು.
ವೇದಿಕೆಯಲ್ಲಿ ಉಪತಹಶೀಲ್ದಾರ್ ಪರಮೇಶ್ವರ ನಾಯಕ್, ಆಹಾರ ಶಾಖೆಯ ಶ್ರೀನಿವಾಸ್, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ಹಾಗೂ ತಾಲೂಕು ಕಚೇರಿ ಸಿಬ್ಬಂದಿಗಳು , ಗ್ರಾಮಕರಣಿಕರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಗ್ರಾಮ ಕರಣಿಕರ ಸಂಘದ ಅಧ್ಯಕ್ಷ ಜನಾರ್ಧನ್ ವಂದಿಸಿದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
