ಪುತ್ತೂರು: ಕಲ್ಲಡ್ಕ ಗಲಭೆಯಲ್ಲಿ ಹಲ್ಲೆಗೊಳಗಾಗಿ ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ ಶೆಟ್ಟಿ ರಾತೋರಾತ್ರಿ ಪರಾರಿಯಾದ ಘಟನೆ ನಡೆದಿದೆ.
ರಾತ್ರಿ ಸುಮಾರು ನಸುಕಿನ ಜಾವ ಆಸ್ಪತ್ರೆಯಲ್ಲಿ ಕಾವಲು ಕಾಯುತ್ತಿದ್ದ ಪೊಲೀಸರು ನಿದ್ರೆಗೆ ಜಾರಿದ ಸಂದರ್ಭ ನೋಡಿ ಪರಾರಿಯಾಗಿರಬಹುದೆಂದು ಶಂಕಿಸಲಾಗಿದೆ.
ವಿಷಯ ತಿಳಿದು ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
