ಮಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಹಾಗೂ ದ್ವೇಷ ರಾಜಕಾರಂವನ್ನು ವಿರೋಧಿಸಿ ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. 

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯ ಸರಕಾರವು ಜನರ ನಡುವೆ ಒಡಕನ್ನು ಮೂಡಿಸುವುದರೋಂದಿಗೆ ಜನರ ಮನಸ್ಸನ್ನು ಒಡೆಯುತ್ತಿದೆ ಎಂದು ಟೀಕಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿಯ ಹಲವಾರು ಮುಖಂಡರುಗಳು ಭಾಗವಹಿಸಿದ್ದರು.
