ಬಂಟ್ವಾಳ: ಕರ್ನಾಟಕ ಸರಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖಾ ಅನುದಾನದಡಿಯಲ್ಲಿ ನಿರ್ಮಾಣಗೊಂಡ ಮಾಣಿ ಗ್ರಾಮ ಪಂಚಾಯತ್ ಗ್ರಂಥಾಲಯದ ನೂತನ ಕಟ್ಟಡವನ್ನು ದಕ್ಷಿನ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.

ಜಿ.ಪಂ.ಸದಸ್ಯೆ ಮಂಜುಳಾ ಮಾವೆ, ತಾ.ಪಂ.ಸದಸ್ಯೆ ಮಂಜುಳ ಕುಶಲ ಎಂ.ಪೆರಾಜೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ಮಮತಾ ಎಸ್.ಶೆಟ್ಟಿ, ಉಪಾಧ್ಯಕ್ಷೆ ಸಂಪಾವತಿ, ಸದಸ್ಯರಾದ ಇಬ್ರಾಹಿಂ, ರಮಣಿ, ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕರಾದ ರಾಜೇಂದ್ರ ಕಲ್ಬಾವಿ, ಇಂಜಿನಿಯರ್ ನವೀನ್, ಮುಖ್ಯ ಗ್ರಂಥಾಲಯಾಧಿಕಾರಿ ಸವಿತಾ ಮೊದಲಾದವರಿದ್ದರು.
