ತನ್ನ ದಿಟ್ಟತನದ ವರದಿಗಾರಿಕೆಯಿಂದ ಹೆಸರುವಾಸಿಯಾಗಿ ಸಾಮಾಜಿಕ ನ್ಯಾಯಕ್ಕಾಗಿ ಸದಾ ಹೋರಾಡುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದು ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ.ಈ ನಿಟ್ಟಿನಲ್ಲಿ ಮಂಗಳೂರು ಪತ್ರಕರ್ತರ ಸಂಘದಿಂದ ಆರೋಪಿಗಳ ಶೀಘ್ರ ಪತ್ತೆ ಮಾಡಬೇಕೆಂಧು ಆಗ್ರಹಿಸಿ ಇಂದು ಮದ್ಯಾಹ್ನ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
