ಬಂಟ್ವಾಳ: ತುಳು ಸಾಹಿತ್ಯ ಅಕಾಡೆಮಿ ಮತ್ತು ಬಂಟ್ವಾಳ ತಾಲ್ಲೂಕಿನ ತುಳು ಕೂಟದ ವತಿಯಿಂದ ಡಿ.೧೦ ರಂದು ನಡೆಸಲು ಉದ್ದೇಶಿಸಿರುವ ತಾಲೂಕು ತುಳು ಸಾಹಿತ್ಯ ಸಮ್ಮೇಳನದ ಬಗ್ಗೆ ಪೂರ್ವ ಭಾವಿ ಸಭೆ ಮತ್ತು ಬಂಟ್ವಾಳ ತುಳು ಕೂಟದ ಸದಸ್ಯತ ಅಭಿಯಾನ ಕಾರ್ಯಕ್ರಮ ಬಿಸಿರೊಡಿನ ಸ್ಪರ್ಷ ಕಲಾ ಮಂದಿರದಲ್ಲಿ ಬಂಟ್ವಾಳ ತುಳು ಕೂಟದ ಅಧ್ಯಕ್ಷ ಸುದರ್ಶನ ಜೈನ್ ಅವರ ಅಧ್ಯಕ್ಷ ತೆಯಲ್ಲಿ ನಡೆಯಿತು.
ವೇದಿಕೆಯಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಸಿಭಂಡಾರಿ. ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮೋಹನ್ ರಾವ್. ತುಳು ಸಾಹಿತ್ಯ ಅಕಾಡೆಮಿ ಯ ಸದಸ್ಯ ಗೋಪಾಲ್ ಅಂಚನ್. ಪ್ರಮುಖರಾದ ವಿಜಯಾ ಶೆಟ್ಟಿ ಸಾಲೆತ್ತೂರು, ವಿದ್ಯಾಶ್ರೀ ಎಸ್, ಹಿರಿಯ ನಾಟಕಕಾರ ಶಿವಾನಂದ ಕರ್ಕೇರ, ಸರಪಾಡಿ ಅಶೋಕ ಶೆಟ್ಟಿ, ಸುಭಾಶ್ಚಂದ್ರ ಜೈನ್, ಡಿ.ಎಂ.ಕುಲಾಲ್.ಸುಧಾನಾಗೇಶ್ ಮೊದಲಾದವರು ಉಪಸ್ಥಿತರಿದ್ದರು. ಎಚ್.ಕೆ.ನಯನಾಡು ಕಾರ್ಯಕ್ರಮ ನಿರೂಪಿದರು.
