ವಿಟ್ಲ:ಪದವಿ ಪೂರ್ವ ಶಿಕ್ಷಣ ಇಲಾಖೆ ದ ಕ ಜಿಲ್ಲೆ ಮತ್ತು ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ 2017 31-10-2017 ರಂದು ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಈ ಕ್ರೀಡಾಕೂಟವನ್ನು ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಉದ್ಘಾಟಿಸಿದರು.
ಕಾಲೇಜಿನ ಗೌರವಾಧ್ಯಕ್ಷ ಜನಾರ್ಧನ ವರ್ಮ ಅರಸರು, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವಿಟ್ಲ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮದಾಸ ಶೆಣೈ, ವಿರೋದ ಪಕ್ಷ ನಾಯಕ ಅಶೋಕ್ ಕುಮಾರ್ ಶೆಟ್ಟಿ, ಸದಸ್ಯ ಜಯಂತ್ ವಿಟ್ಲ, ಶಿಕ್ಷಣ ಸಂಯೋಜಕಿ ಪುಷ್ಪಾ, ರತ್ನಾವತಿ, ರಾಧಾಕೃಷ್ಣ ಅಡ್ಯಂತಾಯ, ಜಗದೀಶ ಬಾಳ್ತಿಲ, ಉಮಾನಾಥ ರೈ, ಗಂಗಾಧರ ರೈ, ವಿಠಲ ವಿದ್ಯಾ ಸಂಘದ ಉಪಾಧ್ಯಕ್ಷ ಕ ಶಿ ವಿಶ್ವನಾಥ, ಕಾರ್ಯದರ್ಶಿ ಯಶವಂತ ವಿಟ್ಲ, ಕೋಶಾಧಿಕಾರಿ ನಿತ್ಯಾನಂದ ನಾಯಕ್, ಪ್ರಾಂಶುಪಾಲ ಆದರ್ಶ ಎ ಎಸ್, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಐಟಿಐ ಪ್ರಾಂಶುಪಾಲ ರಘುರಾಮ ಶಾಸ್ತ್ರಿ, ರಮಾನಾಥ ವಿಟ್ಲ ಮುಂತಾದವರು ಉಪಸ್ಥಿತರಿದ್ದರು.

