ಬಂಟ್ವಾಳ ತಾಲೂಕಿನ ಮೂಲರಪಟ್ಣ ಎಂಬಲ್ಲಿ ಫಲ್ಗುಣಿ ನದಿಯಲ್ಲಿ ಈಜಲು ಹೋದ ಐವರು ಮಕ್ಕಳು  ನೀರುಪಾಲಾದ ಘಟನೆ ಸೋಮವಾರ ಸಂಜೆ ನಡೆದಿದೆ. ಅಸ್ಲಾಮ್ ( 17), ರಮೂಜ್ (17), ಅಜಮಾತ್ (18), ಮುಬಾಶಿರ್ (17), ಸಮಾದ್ (17) ನೀರುಪಾಲಾದವರು. ಇವರಲ್ಲಿ ಮುಂಜಾನೆ ಸಮಾದ್ ಎಂಬಾತನ ಮೃತದೇಹ ಪತ್ತೆಯಾಗಿದೆ.death (1)

death (2)

death (3)

death (5)

death (4)

death (6)

ಮಧ್ಯಾಹ್ನ ಮನೆಯಲ್ಲಿ ಮದುವೆಗೆ ಹೋಗುತ್ತೇವೆ ಎಂದು ಸುಳ್ಳು ಹೇಳಿ ಹೋಗಿದ್ದರು. ರಾತ್ರಿಯಾದರೂ ಬಾರದ ಕಾರಣ ಮನೆಯವರು ಹುಡುಕಾಟ ಶುರುಮಾಡಿದರು. ಈ ಸಂದರ್ಭ ಫಲ್ಗುಣಿ ನದಿ ಪಕ್ಕದಲ್ಲಿ ಪತ್ತೆಯಾದ ಮಕ್ಕಳ ವಸ್ತ್ರ, ಮೊಬೈಲ್ ಪತ್ತೆಯಾಯಿತು. ಇದರಿಂದ ಆತಂಕಿತರಾದ ಮನೆಯವರು, ಗ್ರಾಮಸ್ಥರು ಹುಡುಕಾಟ ಆರಂಭಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ‌. ಒಬ್ಬಾತನ ಮೃತದೇಹ ಪತ್ತೆಯಾಗಿದ್ದು, ಉಳಿದ ನಾಲ್ವರಿಗಾಗಿ ಶೋಧ ಮುಂದುವರಿದಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *