ಉಡುಪಿ:-ವಿಶ್ವ ವೀರ ಶೈವ ಸಂಸ್ಕತಿ ಪ್ರತಿಷ್ಠಾನ ಮತ್ತು ಕನ್ನಡ ಸಂಘ ಬೆಂಗಳೂರು ಇದರ ವತಿಯಿಂದ ಬೆಂಗಳೂರಿನ ನಯನ ಸಭಾ ಭವನದಲ್ಲಿ ನ.14 ರಂದು ನಡೆದ ಮಕ್ಕಳ ದಿನಾಚರಣೆ ಮತ್ತು ಸಾಧಕರಿಗೆ ಗೌರವ ಕಾರ್ಯಕ್ರಮದಲ್ಲಿ ಉಡುಪಿಯ ಯುವ ಸಾಮಾಜಿಕ ಕಾರ್ಯಕರ್ತ ಜೇಸಿ ವಲಯ ಉಪಾದ್ಯಕ್ಷ ರಾಘವೇಂದ್ರ ಪ್ರಭು ಕರ್ವಾಲು ರವರಿಗೆ ಸಮಾಜ ಸೇವಾ ವಿಭಾಗದಲ್ಲಿ ಕೊಡ ಮಾಡುವ ಕನ್ನಡ ಶ್ರೀ ಪುರಸ್ಕಾರವನ್ನು ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ತುಮಕೂರಿನ ಚಿಕ್ಕಪೇಟೆ ಹಿರೇಮಠದ ಶ್ರೀ ಶಿವಾನಂದ ಶಿವಾಚಾರ್ಯ ಶ್ರೀಗಳು,ಕೇಂದ್ರದ ಮಾಜಿ ಸಚಿವ ಎಂ.ವಿ ರಾಜಶೇಖರನ್,ಕರ್ನಾಟಕ ಅಭಿವೃಧಿ ಪ್ರಾಧಿಕಾರದ ಅದ್ಯಕ್ಷ ಅಶೋಕ್,ಬಿಬಿಎಂಪಿ ಸದಸ್ಯರಾದ ಸಂಪತ್ ಕುಮಾರ್,ಸಂಗಾತಿ ನಾಗರಾಜ್,ಧರ್ಮಪಾಲ್ ಮುಂತಾದವರಿದ್ದರು.
