ಉಡುಪಿ: ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಇಂದು ಸಂಜೆ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ.
ನಾಲ್ಕು ಬಾರಿಯ ಶಾಸಕ ಹಾಲಾಡಿ, ತಮ್ಮ ಮಾತೃ ಪಕ್ಷವಾದ ಬಿಜೆಪಿಗೆ ಶೀಘ್ರವೇ ಮರು ಸೇರ್ಪಡೆಗೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಇದಕ್ಕಾಗಿ ಸ್ವತಃ ಹಾಲಾಡಿಯವರೇ ತಮ್ಮ ರಾಜಿನಾಮೆ ಪತ್ರವನ್ನು ಹಿಡಿದುಕೊಂಡು ಹಾವೇರಿ ಜಿಲ್ಲೆ ರಾಣಿಬೆನ್ನೂರಿಗೆ ತೆರಳಿದ್ದು, ಅಲ್ಲಿ ಸ್ಪೀಕರ್ ಕೆ.ಬಿ. ಕೋಳಿವಾಡ ಅವರಿಗೆ ಖುದ್ದಾಗಿ ರಾಜಿನಾಮೆ ಪತ್ರವನ್ನು ನೀಡಲಿದ್ದಾರೆ ಎಮದು ತಿಳಿದು ಬಂದಿದೆ.

