ನವದೆಹಲಿ: ಮಹಾರಾಷ್ಟ್ರದ ಬಿಜೆಪಿ ಸಂಸದ ಚಿಂತಾಮಣ್ ವನಗ (67) ಅನಾರೋಗ್ಯದಿಂದ ಇಲ್ಲಿನ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ.
ಸಂಸದರ ನಿಧನದಿಂದ ಕೇಂದ್ರ ಬಜೆಟ್ ಮಂಡನೆಗೆ ಯಾವುದೇ ಅಡ್ಡಿಯಾಗುವುದಿಲ್ಲ. ಸಂಸತ್ತಿನಲ್ಲಿ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ನಂತರ ಕಲಾಪ ಆರಂಭಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.
ದೆಹಲಿಯ ತಮ್ಮ ನಿವಾಸದಲ್ಲಿ ಚಿಂತಾಮಣ್ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

