ಬೆಂಗಳೂರು: ಮಹದಾಯಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶದ ಬಗ್ಗೆ ಬಿಜೆಪಿಯವರು ಭರವಸೆ ನೀಡಲಿ. ಇಲ್ಲವಾದರೆ ಫೆ.4ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗುವುದು ಎಂದು ಕನ್ನಡ ಚಳವಳಿಯ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆ.4ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬರುತ್ತಿದ್ದು, ಅದಕ್ಕೂ ಮುನ್ನ ಬಿಜೆಪಿಯವರು ರಾಜ್ಯದ ಜನತೆಗೆ ಮಹಾದಾಯಿ ವಿಚಾರದ ಬಗ್ಗೆ ಸ್ಪಷ್ಟಣೆ ನೀಡಲಿ ಇಲ್ಲವಾದರೆ ಬಂದ್ ಮುಂದುವರಿಯಲಿದೆ ಎಂದು ತಿಳಿಸಿದರು.

