ಮುಜಫ್ಫರ್ ನಗರ: ದಲಿತ ಮಹಿಳೆಗೆ ಕಿರುಕುಳ ನೀಡಿದಲ್ಲದೆ, ಆಕೆಯ ಕುಟುಂಬದವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಆರು ಮಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಪವನ್, ಅರವಿಂದ್, ದಿನೇಶ್, ರಾಜೇಶ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಇಲ್ಲಿನ ಬುವಾಡಾ ಗ್ರಾಮದ ದಲಿತ ಮಹಿಳೆಯೋರ್ವರಿಗೆ ಹಾಗೂ ಆಕೆಯ ಕುಟುಂಬದವರ ಮೇಲೆ ವಿನಾ ಕಾರಣ ಈ ಆರೋಪಿಗಳು ಹಲ್ಲೆ ನಡೆಸಿದ್ದರು. ಈ ಬಗ್ಗೆ ಸಂತ್ರಸ್ತೆ ಮಹಿಳೆ ದೂರು ನೀಡಿದ್ದು, ಅದರಂತೆ ಪೊಲೀಸರು ಇಂದು ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

