
ಚೆನ್ನೈ: ಬಿಜೆಪಿ ನಾಯಕನ ಕಾರಿನ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಕೊಯಂಬತ್ತೂರಿನಲ್ಲಿ ನಡೆದಿದೆ.
ಕೊಯಂಬತ್ತೂರು ಬಿಜೆಪಿ ಜಿಲ್ಲಾಧ್ಯಕ್ಷ ನಂದಕುಮಾರ್ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಕಾರಿನ ಮುಂಭಾಗ ಸಂಫೂರ್ಣ ಸುಟ್ಟು ಕರಕಲಾಗಿದೆ. ಈ ಕುರಿತು ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ದೌಡಾಯಿಸಿದ್ದು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
